ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.