September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ನಿಗದಿತ ಅವಧಿಗೆ ಆರ್ಥಿಕ ರಕ್ಷಣೆಯನ್ನು ನೀಡುವ ಟರ್ಮ್ ಇನ್ಶೂರೆನ್ಸ್ ನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂಬ ನಿಟ್ಟಿನಲ್ಲಿ ” ಟರ್ಮ್ ಇನ್ಶೂರೆನ್ಸ್” ಕುರಿತು ಮಾಹಿತಿ ಕಾರ್ಯಗಾರವು ಮಾ.05 ರಂದು ನಡೆಯಿತು.

ಕಾರ್ಯಗಾರದಲ್ಲಿ ಟರ್ಮ್ ಇನ್ಶೂರೆನ್ಸ್ ನ ಮಹತ್ವ , ವಿಮೆಯ ಉಪಯೋಗ , ಟರ್ಮ್ ವಿಮಾ ವಯಸ್ಸಿನ ಮಿತಿ ಮತ್ತು ಇತರ ಅವಶ್ಯಕತೆಗಳ ಪ್ರಾಮುಖ್ಯತೆ, ವಿಭಿನ್ನ ರೀತಿಯ ನೀತಿಗಳು , ತೀವ್ರ ಅನಾರೋಗ್ಯ ಮತ್ತು ಇತರ ಪ್ರಯೋಜನಗಳನ್ನು ಒಳಗೊಂಡಿತ್ತು. ಅದರೊಂದಿಗೆ ಪಾಲಿಸಿ ಬಜಾರ್ ಮತ್ತು ಇತರ ವೆಬ್‌ಸೈಟ್‌ಗಳಲ್ಲಿ ವಿಮೆಯನ್ನು ಖರೀದಿಸುವ ಲೈವ್ ಸೆಷನ್ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು.

ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ.ಎ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಾಶ್ರೀ. ಎ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯಿತು.

Related posts

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya
error: Content is protected !!