25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರಕ್ಕೆ ನಕ್ಸಲ್ ಚಟುವಟಿಕೆ ಬಗ್ಗೆ ಪೂರ್ಣ ಅರಿವಿದ್ದಂತೆ ಕೇವಲ ಆರು ಜನರ ನಕ್ಸಲರ ಶರಣಗಾತಿಯಿಂದ ನಕ್ಸಲ್ ನಿಗ್ರಹ ಪಡೆಯನ್ನೇ ವಿಸರ್ಜಿಸಿ 10 ಕೋಟಿ ವಿಶೇಷ ಪ್ಯಾಕೇಜ್ ನೀಡಿದ್ದನ್ನು ಗಮನಿಸಿದರೆ ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದರೋ ಅಥವಾ ಸರ್ಕಾರವೇ ನಕ್ಸಲರಿಗೆ ಶರಣಾಯಿತೋ ಎಂಬಂತಿದೆ.

ಯೋಜನಾಬದ್ಧವಲ್ಲದ ಯೋಚನೆಗಳಿಂದ ಕರ್ನಾಟಕ ರಾಜ್ಯದ ವಿತ್ತೀಯ ಶಿಸ್ತು ಹಳಿತಪ್ಪಿ ಮೂಲ ಸೌಕರ್ಯಗಳ ಅಭಿವೃದ್ಧಿ ಕುಂಠಿತದೊಂದಿಗೆ ರಾಜ್ಯದ ಜನತೆ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಕಳೆದ ಸಾಲಿನ ಮುಂಗಡ ಪತ್ರದಲ್ಲಿ ವಿವಿಧ ಇಲಾಖೆಗಳಿಗೆ ಘೋಷಿಸಿದ ಅನುದಾನ ಅನುಷ್ಠಾನವಾಗದೆ ದುರುಪಯೋಗವಾಗಿದ್ದು ಈ ಬಾರಿಯೂ ಮುಖ್ಯಮಂತ್ರಿಗಳ ಬಜೆಟ್ ಭಾಷಣದಲ್ಲಿ ಎಂದಿನಂತೆ ಅಲ್ಪ ಸಂಖ್ಯಾತರ ತುಷ್ಟೀಕರಣ, ಮೂಲ ಸೌಕರ್ಯ, ಶಿಕ್ಷಣ, ಆರೋಗ್ಯ, ಇಂಧನ ಕೃಷಿ ಇಲಾಖೆಗಳ ಕಡೆಗಣನೆ ಎದ್ದು ಕಾಣುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಆರ್ಥಿಕ ಪ್ರಗತಿ ಕುಂಠಿತವಾಗುತ್ತಿರುವುದರ ಬಗ್ಗೆ ತೀವ್ರವಾದ ಕಳವಳವನ್ನು ಶಾಸಕ ಹರೀಶ್ ಪೂಂಜ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ.

Related posts

ಬಜೆಟ್ ನಿಂದ ಭಾರತದ ವರ್ಚಸ್ಸು ವಿಶ್ವ ಮಟ್ಟದಲ್ಲಿ ಹೆಚ್ಚಿಸಿದೆ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!