25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ವರದಿ

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

ಬೆಳ್ತಂಗಡಿ : ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ಅಧಿಕಾರಿಗಳು ಬೆಳ್ತಂಗಡಿಯ ಬೆದ್ರಬೆಟ್ಟುವಿನಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ – ಕೊಲ್ಲಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಬೆಳ್ತಂಗಡಿ ಕಡೆಗೆ ಅಕ್ರಮವಾಗಿ ವಿವಿಧ ಜಾತಿಯ ಮರಗಳನ್ನು ಅಶೋಕ್ ಲೈಲಾಂಡ್ ಕಂಪನಿಯ KA-19-AE-6067 ಸಂಖ್ಯೆಯ ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ(FMS) ಅಧಿಕಾರಿಗಳಿಗೆ ಖಚಿತ ಮಾಹಿತಿ ಬಂದಿದ್ದು ತಕ್ಷಣ ಕಾರ್ಯಾಚರಣೆಗಿಳಿದ ತಂಡ ಮಾ.6 ರಂದು ರಾತ್ರಿ ಸುಮಾರು 8:45 ಕ್ಕೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ರಸ್ತೆಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಯಾವುದೇ ದಾಖಲೆ ಇಲ್ಲದೆ ಸಾಗಾಟ ಮಾಡಿರುವುದು ಪತ್ತೆಯಾಗಿದೆ.ಲಾರಿ ಮತ್ತು ಮರಗಳನ್ನು ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ದಾಸ್ತಾನು ಕಚೇರಿಗೆ ತಂದು ಮಾ.7 ರಂದು ಮಹಜರು ನಡೆಸಿದಾಗ ಲಾರಿಯಲ್ಲಿ ವಿವಿಧ ಜಾತಿಯ 11.270 ಘನ ಮೀಟರ್ ಮರ ಪತ್ತೆಯಾಗಿದ್ದು.

ಲಾರಿ ಮತ್ತು ಮರದ ಮೌಲ್ಯ ಸುಮಾರು 15 ಲಕ್ಷವಾಗಿದೆ. ಲಾರಿ ಚಾಲಕ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ನಿವಾಸಿ ಮೊಹಮ್ಮದ್ ಅವರ ಮಗ ಸಿದ್ದಿಕ್ ವಿರುದ್ಧ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಮಂಗಳೂರು ಅರಣ್ಯ ಸಂಚಾರಿ ದಳದ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಸಿದ್ದಿಕ್ ಗೆ ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.ಮಂಗಳೂರು ಅರಣ್ಯ ಸಂಚಾರಿ ದಳ(FMS)ದ ವಿಭಾಗೀಯ ಅರಣ್ಯ ಅಧಿಕಾರಿ(DFO) ಶ್ರೀಕಾಂತ್ ಕಣದಾಲ್ಲಿ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ಶಿವಾನಂದ ಮತ್ತು ವಿನಯ ಕುಮಾರ್, ವಾಹನ ಚಾಲಕ ಜಯಪ್ರಕಾಶ್ ಹಾಗೂ ಬೆಳ್ತಂಗಡಿ ವಲಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ರವೀಂದ್ರ ನಾಯ್ಕ್, ಗಸ್ತು ವನಪಾಲಕ ಪರಶುರಾಮ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ನ.19-20 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!