September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

ಬೆಳ್ತಂಗಡಿ : ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಅಪರ ಸರ್ಕಾರಿ ವಕೀಲರ ಕಛೇರಿ ಉದ್ಘಾಟನೆ ಮತ್ತು ವಕೀಲರ ಸಂಘದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ರವರು ಬೆಳ್ತಂಗಡಿಯ 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡವನ್ನು ವೀಕ್ಷಿಸಿ ಸರ್ಕಾರದ ಮಟ್ಟದಲ್ಲಿ ಹೊಸ ನ್ಯಾಯಾಲಯದ ಕಟ್ಟಡ ಮಂಜೂರಾತಿಗೆ ಬಜೆಟ್ ನಲ್ಲಿ ಅನುದಾನ ನೀಡಲು ಒತ್ತಡ ತರುವ ಬಗ್ಗೆ ವಕೀಲರ ನಿಯೋಗವನ್ನು ಸಂಬಂಧಪಟ್ಟ ಸಚಿವರ ಬಳಿ ಕರೆದೊಯ್ಯುವ ಭರವಸೆ ನೀಡಿದ್ದರು.

ಅದರಂತೆ ಮಾರ್ಚ್ 06 ರಂದು ಬೆಂಗಳೂರಿನ ಬಜೆಟ್ ಅಧಿವೇಶನದ ಸಂದರ್ಭ ವಿಧಾನ ಪರಿಷತ್ ಶಾಸಕರಾದ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ ಕಾನೂನು ಸಚಿವರಾದ ಎಚ್. ಕೆ ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಯವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್, ಬೀ ಕೆ, ಹಿರಿಯ ವಕೀಲರ ಸಮಿತಿ ಚೇರ್ಮನ್ ಅಲೋಶಿಯಸ್ ಎಸ್ ಲೋಬೋ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಅಧ್ಯ್ಷರಾದ ಶಿವ ಕುಮಾರ್ ಎಸ್.ಎಂ ಜೊತೆಗಿದ್ದರು.

Related posts

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya
error: Content is protected !!