22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ 3 ತಿಂಗಳ ಕಾಲ ಮಿತ್ತಬಾಗಿಲು ನಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು, ಇದರ ಸಮಾರೋಪ ಕಾರ್ಯಕ್ರಮವನ್ನು ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ ರವರು ವಹಿಸಿ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕಾರ್ಯಕ್ರಮವಾದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಷನ್ ಕ್ಲಾಸ್ ಹಮ್ಮಿ ಕೊಂಡಿದ್ದು ಪರೀಕ್ಷಾ ಸಮಯದಲ್ಲಿ ಎಸ್. ಎಸ್. ಎಲ್. ಸಿ ಮಕ್ಕಳಿಗೆ ಅನುಕೂಲ ವಾಗಿದ್ದು ಎಲ್ಲ ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕೆಂದರು. ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಈ ಒಂದು ಅವಕಾಶ ಕಲ್ಪಿಸಿದಕ್ಕಾಗಿ ಸಂತೋಷ ವ್ಯಕ್ತ ಪಡಿಸಿದರು. ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿದ ತಾಲೂಕಿನ ಯೋಜನಾಧಿಕಾರಿಯಾವರಾದ ಸುರೇಂದ್ರ ರವರು ಪೂಜ್ಯರು
ಯೋಜನೆಯ ಮೂಲಕ ಹತ್ತು ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿದ್ಯೆಯ ಜೊತೆಗೆ ಮಕ್ಕಳಲ್ಲಿ ಸಂಸ್ಕೃತಿ ಸಂಸ್ಕಾರ ಕೂಡ ಬೆಳೆಸಿಕೊಳ್ಳಬೇಕು ಎಂದರು.


ವಿಶೇಷ ತರಗತಿ ನೀಡಿದ ಶಿಕ್ಷಕರಾದ ಶ್ವೇತ , ಶಾಲಾ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಒಕ್ಕೂಟ ಕಾರ್ಯದರ್ಶಿಯಾದ ರಮೇಶ್ ಉಪಸ್ಥಿತರಿದ್ದರು. ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ವರಲಕ್ಷ್ಮಿ ಸ್ವಾಗತಿಸಿ ಶಾಲಾ ಶಿಕ್ಷಕರಾದ ಮಂಜುಳಾರವರು ಧನ್ಯವಾದವಿತ್ತರು.

Related posts

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya
error: Content is protected !!