September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಟೀಕಿಸಿದ್ದಾರೆ.


ಸಾಲ ಮಾಡಿ ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಶಾಶ್ವತ ಯೋಜನೆಗಳನ್ನು ಆಯವ್ಯಯದಿಂದ ತೆಗೆದುಹಾಕಲಾಗಿದೆ. ಮತಬ್ಯಾಂಕ್ ಆಧಾರಿತ, ರಾಜ್ಯದ ಆರ್ಥಿಕ ಶಿಸ್ತನ್ನು ಹಾಳುಗೆಡುವ ಬಜೆಟ್ ಇದಾಗಿದೆ.
ಕೌಶಲ್ಯ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಕಡೆಗೆಣಿಸಲಾಗಿದ್ದು ಮತ್ತು ರೈತ ವಿರೋಧಿಯಾಗಿದ್ದು, ಸಾಂಸ್ಕೃತಿಕ ವಲಯ, ಪ್ರವಾಸೋದ್ಯಮವನ್ನು ನಿರ್ಲಕ್ಷಿಸಲಾಗಿದೆ. ಎಸ್.ಸಿ, ಎಸ್.ಟಿ., ಮತ್ತು ಓಬಿಸಿ ಗಳು ತಮ್ಮ ಆರ್ಥಿಕ ಸದೃಢತೆಯತ್ತ ಸಾಗಲು ನೀರಸ ಬಂಡವಾಳ ಒದಗಿಸಲಾಗಿದೆ. ವಕ್ಭ ಆಸ್ತಿಯ ರಕ್ಷಣೆಗಾಗಿ 150 ಕೋಟಿ ಅನುದಾನ ಮೀಸಲಿರಿಸಿದ್ದೇ ಅಲ್ಲದೆ ಮುಸ್ಲಿಮರಿಗಷ್ಟೇ ಸರಕಾರಿ ಗುತ್ತಿಗೆಯಲ್ಲಿ ಮೀಸಲು ನೀಡಿರುವುದು, ತಸ್ತೀಕ್ ಹೆಚ್ಚಿಸದೆ, ಮುಲ್ಲಾ, ಇಮಾಮ್ ಗಳಿಗೆ ಗೌರವಧನ ಹೆಚ್ಚಿಸುವ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿದೆ. ಕನ್ನಡಿಯೊಳಗಿನ ಗಂಟಿನೊಳಗೆ ಭ್ರಮೆಯಲ್ಲಿರುವ ಬಂಡವಾಳವಿಲ್ಲದ ಬಡಾಯಿ ಬಜೆಟ್ ನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.

ಆಯವ್ಯಯ ಗಾತ್ರದಲ್ಲಿ ಶೇ. 27 ಸಾಲ ವೆಚ್ಚದಲ್ಲಿ ಶೇ. 18 ಬಡ್ಡಿಗೆ ಹೋಗಿದೆ. ಒಟ್ಟಾರೆ ಆಯವ್ಯಯದಲ್ಲಿ ಶೇ. 45 ರಷ್ಟು ಸಾಲದ ಹೊರೆ ಇದೆ. ಶಿಕ್ಷಣದ ಯೋಜನೆಗಳನ್ನು ಕಡೆಗೆಣಿಸಿದೆ. ಬರಗಾಲ ಕುಡಿಯುವ ನೀರು, ಬೆಳಹಾನಿ ಪರಿಹಾರ ಇವುಗಳ ಬಗ್ಗೆ ಚಕಾರವೆತ್ತದೆ, ಅರೆಕಾಲಿಕ ಉಪನ್ಯಾಸಕರ ಮತ್ತು ಇತರೇ ಗುತ್ತಿಗೆ ನೌಕರರ ಭದ್ರೆಗೆ ಆಸಕ್ತಿ ವಹಿಸದೆ, ಲಕ್ಷಾಂತರ ಹಾಲು ಉತ್ಪಾದಕ ರೈತ ಬಾಂಧವರಿಗೆ ಬಾಕಿ ಇರುವ ಪ್ರೋತ್ಸಧನದ ಬಗ್ಗೆ ಮಾತನಾಡದೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಚಾಳಿಯನ್ನು ಮುಖ್ಯಮಂತ್ರಿಯವರು ಮುಂದುವರೆಸಿದ್ದಾರೆ.

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya
error: Content is protected !!