23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಟೀಕಿಸಿದ್ದಾರೆ.


ಸಾಲ ಮಾಡಿ ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಶಾಶ್ವತ ಯೋಜನೆಗಳನ್ನು ಆಯವ್ಯಯದಿಂದ ತೆಗೆದುಹಾಕಲಾಗಿದೆ. ಮತಬ್ಯಾಂಕ್ ಆಧಾರಿತ, ರಾಜ್ಯದ ಆರ್ಥಿಕ ಶಿಸ್ತನ್ನು ಹಾಳುಗೆಡುವ ಬಜೆಟ್ ಇದಾಗಿದೆ.
ಕೌಶಲ್ಯ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಕಡೆಗೆಣಿಸಲಾಗಿದ್ದು ಮತ್ತು ರೈತ ವಿರೋಧಿಯಾಗಿದ್ದು, ಸಾಂಸ್ಕೃತಿಕ ವಲಯ, ಪ್ರವಾಸೋದ್ಯಮವನ್ನು ನಿರ್ಲಕ್ಷಿಸಲಾಗಿದೆ. ಎಸ್.ಸಿ, ಎಸ್.ಟಿ., ಮತ್ತು ಓಬಿಸಿ ಗಳು ತಮ್ಮ ಆರ್ಥಿಕ ಸದೃಢತೆಯತ್ತ ಸಾಗಲು ನೀರಸ ಬಂಡವಾಳ ಒದಗಿಸಲಾಗಿದೆ. ವಕ್ಭ ಆಸ್ತಿಯ ರಕ್ಷಣೆಗಾಗಿ 150 ಕೋಟಿ ಅನುದಾನ ಮೀಸಲಿರಿಸಿದ್ದೇ ಅಲ್ಲದೆ ಮುಸ್ಲಿಮರಿಗಷ್ಟೇ ಸರಕಾರಿ ಗುತ್ತಿಗೆಯಲ್ಲಿ ಮೀಸಲು ನೀಡಿರುವುದು, ತಸ್ತೀಕ್ ಹೆಚ್ಚಿಸದೆ, ಮುಲ್ಲಾ, ಇಮಾಮ್ ಗಳಿಗೆ ಗೌರವಧನ ಹೆಚ್ಚಿಸುವ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿದೆ. ಕನ್ನಡಿಯೊಳಗಿನ ಗಂಟಿನೊಳಗೆ ಭ್ರಮೆಯಲ್ಲಿರುವ ಬಂಡವಾಳವಿಲ್ಲದ ಬಡಾಯಿ ಬಜೆಟ್ ನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.

ಆಯವ್ಯಯ ಗಾತ್ರದಲ್ಲಿ ಶೇ. 27 ಸಾಲ ವೆಚ್ಚದಲ್ಲಿ ಶೇ. 18 ಬಡ್ಡಿಗೆ ಹೋಗಿದೆ. ಒಟ್ಟಾರೆ ಆಯವ್ಯಯದಲ್ಲಿ ಶೇ. 45 ರಷ್ಟು ಸಾಲದ ಹೊರೆ ಇದೆ. ಶಿಕ್ಷಣದ ಯೋಜನೆಗಳನ್ನು ಕಡೆಗೆಣಿಸಿದೆ. ಬರಗಾಲ ಕುಡಿಯುವ ನೀರು, ಬೆಳಹಾನಿ ಪರಿಹಾರ ಇವುಗಳ ಬಗ್ಗೆ ಚಕಾರವೆತ್ತದೆ, ಅರೆಕಾಲಿಕ ಉಪನ್ಯಾಸಕರ ಮತ್ತು ಇತರೇ ಗುತ್ತಿಗೆ ನೌಕರರ ಭದ್ರೆಗೆ ಆಸಕ್ತಿ ವಹಿಸದೆ, ಲಕ್ಷಾಂತರ ಹಾಲು ಉತ್ಪಾದಕ ರೈತ ಬಾಂಧವರಿಗೆ ಬಾಕಿ ಇರುವ ಪ್ರೋತ್ಸಧನದ ಬಗ್ಗೆ ಮಾತನಾಡದೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಚಾಳಿಯನ್ನು ಮುಖ್ಯಮಂತ್ರಿಯವರು ಮುಂದುವರೆಸಿದ್ದಾರೆ.

Related posts

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!