ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

ಉಜಿರೆ: ಇಲ್ಲಿಯ ಭಾರತ್ ಆಟೋ ಕಾರ್ ಸಂಸ್ಥೆಯ ಬಳಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.07ರಂದು ರಾತ್ರಿ ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಸರಸ್ವತಿ ಮೆಸ್ ಮಾಲಕ ಜಯಂತ್(56 ವ) ಭಾರತ್ ಶೋರೂಮ್ ಬಳಿ ಅಜಿತ್ ನಗರ ರಸ್ತೆಗೆ ತಿರುಗಿಸುವ ವೇಳೆ ಅನುಗ್ರಹದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸ್ಕೂಟ‌ರ್ ಸವಾರನನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾ.08) ಮೃತ ಪಟ್ಟಿದ್ದಾರೆ.

ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಆ.3) ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya
error: Content is protected !!