23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ ನಡೆಸಲಾಯಿತು.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.

Related posts

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya
error: Content is protected !!