23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದಂತಹ ಚಂದ್ರಕಾಂತ ಪ್ರಭು ಇವರು ಇತ್ತೀಚೆಗೆ ವಯೋ ನಿವೃತ್ತಿ ಹೊಂದಿದರಿಂದ ಕೀರ್ತನಾ ಕಲಾ ತಂಡದ ವತಿಯಿಂದ ಅಭಿನಂದನೆ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ತಂಡದ ಸಂಘಟನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಇವರು ಸಿಇಓ ಇವರಿಗೆ ಯಕ್ಷಗಾನ ಶೈಲಿಯ ಹಾಡಿನ ಮೂಲಕ ಗೌರವಾರ್ಪಣೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶ್ ಬಂಗೇರ ಕೂಳೂರು ಮುಂಡಾಜೆ ಪಂಚಾಯತ್ ಅಧ್ಯಕ್ಷರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಂಡದ ಸಂಚಾಲಕರಾದ ಮಧು ಶೆಟ್ಟಿ ಹುರ್ತಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಶೆಟ್ಟಿ ಅಗರಿ, ಮಂಡಾಜೆ ಪ್ಯಾಕ್ಸ್ ನ ನಿರ್ದೇಶಕರಾದ ಚೆನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್, ಲ್ಯಾoಪ್ಸ್ ಸೊಸೈಟಿ ನಿರ್ದೇಶಕಿ ಲೀಲಾವತಿ ಗೌರವ ಉಪಸ್ಥಿತರಿದ್ದರು.
ತಂಡದ ಪದಾಧಿಕಾರಿಗಳಾದಂತಹ ಮನೋಹರ ನಾಯ್ಕ, ಪ್ರದೀಪ್ ಶೆಟ್ಟಿ, ದುಗ್ಗಪ್ಪ ನಾಯ್ಕ, ವಿನೋದ್ ಶೆಟ್ಟಿ, ಪ್ರಮೋದ್ ಪೂಜಾರಿ, ಚಂದ್ರಶೇಖರ ಗೌಡ, ನಿಶ್ಮಿತಾ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿತೀಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದವನ್ನು ನೀಡಿದರು. ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಇವರು ಅಭಿನಂದನಾ ಭಾಷಣ ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ : ಕೊಕ್ಕಡ ಶಾಖೆಯ ಸಂಚಾಲಕರಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಿಂದ ವೈದ್ಯಕೀಯ ಚಿಕಿತ್ಸಾ ನೆರವು

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya
error: Content is protected !!