September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದಂತಹ ಚಂದ್ರಕಾಂತ ಪ್ರಭು ಇವರು ಇತ್ತೀಚೆಗೆ ವಯೋ ನಿವೃತ್ತಿ ಹೊಂದಿದರಿಂದ ಕೀರ್ತನಾ ಕಲಾ ತಂಡದ ವತಿಯಿಂದ ಅಭಿನಂದನೆ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ತಂಡದ ಸಂಘಟನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಇವರು ಸಿಇಓ ಇವರಿಗೆ ಯಕ್ಷಗಾನ ಶೈಲಿಯ ಹಾಡಿನ ಮೂಲಕ ಗೌರವಾರ್ಪಣೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶ್ ಬಂಗೇರ ಕೂಳೂರು ಮುಂಡಾಜೆ ಪಂಚಾಯತ್ ಅಧ್ಯಕ್ಷರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಂಡದ ಸಂಚಾಲಕರಾದ ಮಧು ಶೆಟ್ಟಿ ಹುರ್ತಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಶೆಟ್ಟಿ ಅಗರಿ, ಮಂಡಾಜೆ ಪ್ಯಾಕ್ಸ್ ನ ನಿರ್ದೇಶಕರಾದ ಚೆನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್, ಲ್ಯಾoಪ್ಸ್ ಸೊಸೈಟಿ ನಿರ್ದೇಶಕಿ ಲೀಲಾವತಿ ಗೌರವ ಉಪಸ್ಥಿತರಿದ್ದರು.
ತಂಡದ ಪದಾಧಿಕಾರಿಗಳಾದಂತಹ ಮನೋಹರ ನಾಯ್ಕ, ಪ್ರದೀಪ್ ಶೆಟ್ಟಿ, ದುಗ್ಗಪ್ಪ ನಾಯ್ಕ, ವಿನೋದ್ ಶೆಟ್ಟಿ, ಪ್ರಮೋದ್ ಪೂಜಾರಿ, ಚಂದ್ರಶೇಖರ ಗೌಡ, ನಿಶ್ಮಿತಾ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿತೀಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದವನ್ನು ನೀಡಿದರು. ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಇವರು ಅಭಿನಂದನಾ ಭಾಷಣ ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

Suddi Udaya
error: Content is protected !!