24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಾಯರ್ತಡ್ಕ ಶಾಲೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ರಾಷ್ಟ್ರಪತಿ ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರಿಗೆ ಸನ್ಮಾನ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!