March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya
error: Content is protected !!