July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!