September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya
error: Content is protected !!