26.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಮಾ. 08ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿಯವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಸದಭಿರುಚಿ, ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುವ ಅಗತ್ಯತೆಯ ಕುರಿತು ವಿವರಿಸಿದರು. ಈ ಶುಭ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ದಾದಿಯವರಾದ ಶ್ರೀಮತಿ ಫಿಲೋಮಿನಾ ಹಾಗೂ ಆಶ್ರಮ ನಿವಾಸಿ ದಿವ್ಯರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಂಗತ ಶ್ರೀಯುತ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಈ ಸಭಾ ಕಾರ್ಯಕ್ರಮದ ಅತಿಥಿಗಳೆಲ್ಲರನ್ನು ಸಂಸ್ಥೆಯ ಸಿಬ್ಬಂದಿಯವರಾದ ಕು. ದೀಕ್ಷಿತಾರವರು ಸ್ವಾಗತಿಸಿ, ಸಂಸ್ಥೆಯ ಸಿಬ್ಬಂದಿ ಸುಜಾತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

Related posts

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!