22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಮಾ. 08ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿಯವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಸದಭಿರುಚಿ, ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುವ ಅಗತ್ಯತೆಯ ಕುರಿತು ವಿವರಿಸಿದರು. ಈ ಶುಭ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ದಾದಿಯವರಾದ ಶ್ರೀಮತಿ ಫಿಲೋಮಿನಾ ಹಾಗೂ ಆಶ್ರಮ ನಿವಾಸಿ ದಿವ್ಯರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಂಗತ ಶ್ರೀಯುತ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಈ ಸಭಾ ಕಾರ್ಯಕ್ರಮದ ಅತಿಥಿಗಳೆಲ್ಲರನ್ನು ಸಂಸ್ಥೆಯ ಸಿಬ್ಬಂದಿಯವರಾದ ಕು. ದೀಕ್ಷಿತಾರವರು ಸ್ವಾಗತಿಸಿ, ಸಂಸ್ಥೆಯ ಸಿಬ್ಬಂದಿ ಸುಜಾತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

Related posts

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya
error: Content is protected !!