23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ ಇದಾಗಿದೆ ಎಂದು ವಿಧಾನಪರಿಷತ್ ಸದಸ್ಯ ಟೀಕಿಸಿದ್ದಾರೆ.


ಸಾಲ ಮಾಡಿ ಬಜೆಟ್ ಗಾತ್ರವನ್ನು ಹಿಗ್ಗಿಸಲಾಗಿದೆ. ಶಾಶ್ವತ ಯೋಜನೆಗಳನ್ನು ಆಯವ್ಯಯದಿಂದ ತೆಗೆದುಹಾಕಲಾಗಿದೆ. ಮತಬ್ಯಾಂಕ್ ಆಧಾರಿತ, ರಾಜ್ಯದ ಆರ್ಥಿಕ ಶಿಸ್ತನ್ನು ಹಾಳುಗೆಡುವ ಬಜೆಟ್ ಇದಾಗಿದೆ.
ಕೌಶಲ್ಯ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಯನ್ನು ಕಡೆಗೆಣಿಸಲಾಗಿದ್ದು ಮತ್ತು ರೈತ ವಿರೋಧಿಯಾಗಿದ್ದು, ಸಾಂಸ್ಕೃತಿಕ ವಲಯ, ಪ್ರವಾಸೋದ್ಯಮವನ್ನು ನಿರ್ಲಕ್ಷಿಸಲಾಗಿದೆ. ಎಸ್.ಸಿ, ಎಸ್.ಟಿ., ಮತ್ತು ಓಬಿಸಿ ಗಳು ತಮ್ಮ ಆರ್ಥಿಕ ಸದೃಢತೆಯತ್ತ ಸಾಗಲು ನೀರಸ ಬಂಡವಾಳ ಒದಗಿಸಲಾಗಿದೆ. ವಕ್ಭ ಆಸ್ತಿಯ ರಕ್ಷಣೆಗಾಗಿ 150 ಕೋಟಿ ಅನುದಾನ ಮೀಸಲಿರಿಸಿದ್ದೇ ಅಲ್ಲದೆ ಮುಸ್ಲಿಮರಿಗಷ್ಟೇ ಸರಕಾರಿ ಗುತ್ತಿಗೆಯಲ್ಲಿ ಮೀಸಲು ನೀಡಿರುವುದು, ತಸ್ತೀಕ್ ಹೆಚ್ಚಿಸದೆ, ಮುಲ್ಲಾ, ಇಮಾಮ್ ಗಳಿಗೆ ಗೌರವಧನ ಹೆಚ್ಚಿಸುವ ಮೂಲಕ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಿದೆ. ಕನ್ನಡಿಯೊಳಗಿನ ಗಂಟಿನೊಳಗೆ ಭ್ರಮೆಯಲ್ಲಿರುವ ಬಂಡವಾಳವಿಲ್ಲದ ಬಡಾಯಿ ಬಜೆಟ್ ನ್ನು ಮುಖ್ಯಮಂತ್ರಿಗಳು ಮಂಡಿಸಿದ್ದಾರೆ.

ಆಯವ್ಯಯ ಗಾತ್ರದಲ್ಲಿ ಶೇ. 27 ಸಾಲ ವೆಚ್ಚದಲ್ಲಿ ಶೇ. 18 ಬಡ್ಡಿಗೆ ಹೋಗಿದೆ. ಒಟ್ಟಾರೆ ಆಯವ್ಯಯದಲ್ಲಿ ಶೇ. 45 ರಷ್ಟು ಸಾಲದ ಹೊರೆ ಇದೆ. ಶಿಕ್ಷಣದ ಯೋಜನೆಗಳನ್ನು ಕಡೆಗೆಣಿಸಿದೆ. ಬರಗಾಲ ಕುಡಿಯುವ ನೀರು, ಬೆಳಹಾನಿ ಪರಿಹಾರ ಇವುಗಳ ಬಗ್ಗೆ ಚಕಾರವೆತ್ತದೆ, ಅರೆಕಾಲಿಕ ಉಪನ್ಯಾಸಕರ ಮತ್ತು ಇತರೇ ಗುತ್ತಿಗೆ ನೌಕರರ ಭದ್ರೆಗೆ ಆಸಕ್ತಿ ವಹಿಸದೆ, ಲಕ್ಷಾಂತರ ಹಾಲು ಉತ್ಪಾದಕ ರೈತ ಬಾಂಧವರಿಗೆ ಬಾಕಿ ಇರುವ ಪ್ರೋತ್ಸಧನದ ಬಗ್ಗೆ ಮಾತನಾಡದೆ, ಕೇಂದ್ರದ ಮೇಲೆ ಗೂಬೆ ಕೂರಿಸುವ ಚಾಳಿಯನ್ನು ಮುಖ್ಯಮಂತ್ರಿಯವರು ಮುಂದುವರೆಸಿದ್ದಾರೆ.

Related posts

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!