25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಇಂದು(ಮಾ.8) ಸಾರ್ವಜನಿಕ ಸತ್ಯನಾರಾಯಣ ಪೂಜೆ ಜರಗಿತು.

ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗಣ ಹೋಮ, ಶ್ರೀ ನಾಗದೇವರಿಗೆ ಪಂಚಾಮೃತ ಅಭಿಷೇಕ, ಪರಿವಾರ ದೈವಗಳಿಗೆ ಪಂಚಾಮೃತ ಕಳಸಾಭಿಷೇಕ, ಪಂಚಪರ್ವ ಸೇವೆ, ಮಹಾಲಿಂಗೇಶ್ವರ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರಗಿತು.

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಶಿರ್ಲಾಲು ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ನವೀನ್ ಕುಮಾರ್ ಸಾಮಾನಿ, ಬಳಂಜ ಗ್ರಾ.ಪಂ ಅಧ್ಯಕ್ಷೆ ಶೋಭಾ ಕುಲಾಲ್, ಪಿಡಿಓ ಗಣೇಶ್ ಶೆಟ್ಟಿ , ಸೇವಾ ಸಮಿತಿ ಅಧ್ಯಕ್ಷ ರಾಜಿತ್ ರೈ ಪಂಬಿದಬೆಟ್ಟು, ಮೊಕ್ತೇಸರರು ಕೆ. ರಾಮಚಂದ್ರ ರಾವ್ ಕಾಪಿನಡ್ಕ, ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ ಭಟ್ ಕಾಪಿನಡ್ಕ, ಸೇವಾ ಸಮಿತಿ ಗೌರವಾಧ್ಯಕ್ಷ ಶಿವಾನಂದ ಹೆಗ್ಡೆ, ಪ್ರಧಾನ ಅರ್ಚಕರು ನಾರಾಯಣ ಭಟ್, ಕೋಶಾಧಿಕಾರಿ ಸಂತೋಷ್ ಹೆಗ್ಡೆ ಪರ್ಲಂಡ, ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಸಾಯಂಕಾಲ ಭಜನಾ ಕಾರ್ಯಕ್ರಮ ಕಾರ್ತಿಕ ಪೂಜೆ ರಂಗಪೂಜೆ, ಬಲಿ ಉತ್ಸವ, ರಾಜಂಗನ ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ಜರಗಲಿದೆ, ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ತುಳು ಯಕ್ಷಗಾನ ತಾಳಮದ್ದಳೆ ಶನಿ ಮಹಾತ್ಮೆ ಜರಗಲಿದೆ,

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ ಶಿಪ್: ಉಜಿರೆ ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿ ದೀಕ್ಷಿತಾ. ಕೆ ರವರಿಗೆ ಬೆಳ್ಳಿ ಪದಕ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya
error: Content is protected !!