March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ ನಡೆಸಲಾಯಿತು.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.

Related posts

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
error: Content is protected !!