22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ ನಡೆಸಲಾಯಿತು.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.

Related posts

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!