ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಕು. ಮನ್ವಿ ಕೆ. ಆರ್ ಇವರು ಸಮಗ್ರ ಶಿಕ್ಷಣ ಇಲಾಖೆ, ನಾಲೆಡ್ಜ್ ಆಫ್ ಇಂಡಿಯಾ ಕ್ವಿಜ್ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕರ್ನಾಟಕ ಸರ್ಕಾರಿ ಶಾಲೆಗಳಿಗೆ ವಿಶೇಷ ರಸಪ್ರಶ್ನೆ 2024-25 ಕ್ವಿಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇವರು ಕುರಾಯ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪಾವತಿ ಕೆ ದಂಪತಿಯ ಪುತ್ರಿ