23.7 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!