30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!