25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಮಾ. 08ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿಯವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಸದಭಿರುಚಿ, ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುವ ಅಗತ್ಯತೆಯ ಕುರಿತು ವಿವರಿಸಿದರು. ಈ ಶುಭ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ದಾದಿಯವರಾದ ಶ್ರೀಮತಿ ಫಿಲೋಮಿನಾ ಹಾಗೂ ಆಶ್ರಮ ನಿವಾಸಿ ದಿವ್ಯರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಂಗತ ಶ್ರೀಯುತ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಈ ಸಭಾ ಕಾರ್ಯಕ್ರಮದ ಅತಿಥಿಗಳೆಲ್ಲರನ್ನು ಸಂಸ್ಥೆಯ ಸಿಬ್ಬಂದಿಯವರಾದ ಕು. ದೀಕ್ಷಿತಾರವರು ಸ್ವಾಗತಿಸಿ, ಸಂಸ್ಥೆಯ ಸಿಬ್ಬಂದಿ ಸುಜಾತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya
error: Content is protected !!