September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಮಾ. 08ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿಯವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಸದಭಿರುಚಿ, ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುವ ಅಗತ್ಯತೆಯ ಕುರಿತು ವಿವರಿಸಿದರು. ಈ ಶುಭ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ದಾದಿಯವರಾದ ಶ್ರೀಮತಿ ಫಿಲೋಮಿನಾ ಹಾಗೂ ಆಶ್ರಮ ನಿವಾಸಿ ದಿವ್ಯರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಂಗತ ಶ್ರೀಯುತ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಈ ಸಭಾ ಕಾರ್ಯಕ್ರಮದ ಅತಿಥಿಗಳೆಲ್ಲರನ್ನು ಸಂಸ್ಥೆಯ ಸಿಬ್ಬಂದಿಯವರಾದ ಕು. ದೀಕ್ಷಿತಾರವರು ಸ್ವಾಗತಿಸಿ, ಸಂಸ್ಥೆಯ ಸಿಬ್ಬಂದಿ ಸುಜಾತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!