22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

ಕೊಕ್ಕಡ: ಉಪ್ಪಾರಪಳಿಕೆ, ಪುದ್ಯಂಗ, ಕೊಡಿಂಗೇರಿ, ಆರ್ಲ ಪ್ರದೇಶದ ಜನರ ಸುಮಾರು 40 ವರ್ಷಗಳ ಬೇಡಿಕೆಯ ರೂ.3.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜರನ್ನು ಸ್ಥಳೀಯರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ , ಕೊಕ್ಕಡ ಗ್ರಾ.ಪಂ. ನಿಕಟಪೂರ್ವಧ್ಯಕ್ಷ ಯೋಗಿಶ್ ಆಲಂಬಿಲ, ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಕೊಕ್ಕಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಮಾಜಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪುರುಷೋತ್ತಮ, ಲತಾ, ಪ್ರಮೀಳಾ, ವಿಶ್ವನಾಥ, ಜಾನಕಿ, ಜಗದೀಶ್, ವನಜಾಕ್ಷಿ , ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಠ್ಠಲ ಭಂಡಾರಿ, ಶ್ರೀನಾಥ್ ಬಡಕೈಲು, ರವಿಚಂದ್ರ ಪುಡ್ಕೆತ್ತೂರು, ಕೊಕ್ಕಡ ಸೌತಡ್ಕ ದೇವಸ್ಥಾನದ ವವ್ಯಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಉಮೇಶ್ ಅಲಂಗೂರು, ಗೋಳಿತೊಟ್ಟು ಗ್ರಾ. ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಬಾಬು ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಜನಾರ್ಧನ ಗೌಡ, ಲೋಕೇಶ್ ಜಾರಿಗೆತ್ತಡಿ ಕೊಕ್ಕಡ, ಬಾಲಚಂದ್ರ ಗೌಡ
ಪುಂಚೆತ್ತಿಮಾರು, ಅಣ್ಣು ಗೌಡ ಕೊಡಿಂಗೇರಿ, ಗಂಗಯ್ಯ ಗೌಡ ಕೊಡಿಂಗೇರಿ, ಗಣೇಶ್ ಅಶ್ವತ್ತಡಿ, ಯತೀಂದ್ರ ಗೌಡ ಕೊಕ್ಕಡ ಪ್ರೀತಂ ಆಯಿಲ್ ಮಿಲ್, ರಾಮಣ್ಣ ಗೌಡ ವಳಾಲು , ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ಅಧ್ಯಕ್ಷ ಶ್ರೀನಾಥ್ , ಬಿಜೆಪಿ ಕಾರ್ಯಕರ್ತರು ಹಾಗೂ ಕೊಡಿಂಗೇರಿ ಪರಿಸರದವರು ಉಪಸ್ಥಿತರಿದ್ದರು.

Related posts

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya
error: Content is protected !!