24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದಂತಹ ಚಂದ್ರಕಾಂತ ಪ್ರಭು ಇವರು ಇತ್ತೀಚೆಗೆ ವಯೋ ನಿವೃತ್ತಿ ಹೊಂದಿದರಿಂದ ಕೀರ್ತನಾ ಕಲಾ ತಂಡದ ವತಿಯಿಂದ ಅಭಿನಂದನೆ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ತಂಡದ ಸಂಘಟನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಇವರು ಸಿಇಓ ಇವರಿಗೆ ಯಕ್ಷಗಾನ ಶೈಲಿಯ ಹಾಡಿನ ಮೂಲಕ ಗೌರವಾರ್ಪಣೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶ್ ಬಂಗೇರ ಕೂಳೂರು ಮುಂಡಾಜೆ ಪಂಚಾಯತ್ ಅಧ್ಯಕ್ಷರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಂಡದ ಸಂಚಾಲಕರಾದ ಮಧು ಶೆಟ್ಟಿ ಹುರ್ತಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಶೆಟ್ಟಿ ಅಗರಿ, ಮಂಡಾಜೆ ಪ್ಯಾಕ್ಸ್ ನ ನಿರ್ದೇಶಕರಾದ ಚೆನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್, ಲ್ಯಾoಪ್ಸ್ ಸೊಸೈಟಿ ನಿರ್ದೇಶಕಿ ಲೀಲಾವತಿ ಗೌರವ ಉಪಸ್ಥಿತರಿದ್ದರು.
ತಂಡದ ಪದಾಧಿಕಾರಿಗಳಾದಂತಹ ಮನೋಹರ ನಾಯ್ಕ, ಪ್ರದೀಪ್ ಶೆಟ್ಟಿ, ದುಗ್ಗಪ್ಪ ನಾಯ್ಕ, ವಿನೋದ್ ಶೆಟ್ಟಿ, ಪ್ರಮೋದ್ ಪೂಜಾರಿ, ಚಂದ್ರಶೇಖರ ಗೌಡ, ನಿಶ್ಮಿತಾ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿತೀಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದವನ್ನು ನೀಡಿದರು. ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಇವರು ಅಭಿನಂದನಾ ಭಾಷಣ ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya
error: Content is protected !!