September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದಂತಹ ಚಂದ್ರಕಾಂತ ಪ್ರಭು ಇವರು ಇತ್ತೀಚೆಗೆ ವಯೋ ನಿವೃತ್ತಿ ಹೊಂದಿದರಿಂದ ಕೀರ್ತನಾ ಕಲಾ ತಂಡದ ವತಿಯಿಂದ ಅಭಿನಂದನೆ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು.

ತಂಡದ ಸಂಘಟನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಇವರು ಸಿಇಓ ಇವರಿಗೆ ಯಕ್ಷಗಾನ ಶೈಲಿಯ ಹಾಡಿನ ಮೂಲಕ ಗೌರವಾರ್ಪಣೆಯನ್ನು ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶ್ ಬಂಗೇರ ಕೂಳೂರು ಮುಂಡಾಜೆ ಪಂಚಾಯತ್ ಅಧ್ಯಕ್ಷರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ತಂಡದ ಸಂಚಾಲಕರಾದ ಮಧು ಶೆಟ್ಟಿ ಹುರ್ತಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಮಣ್ಣ ಶೆಟ್ಟಿ ಅಗರಿ, ಮಂಡಾಜೆ ಪ್ಯಾಕ್ಸ್ ನ ನಿರ್ದೇಶಕರಾದ ಚೆನ್ನಕೇಶವ ಅರಸ ಮಜಲು ,ಅಶ್ವಿನಿ ಹೆಬ್ಬಾರ್, ಲ್ಯಾoಪ್ಸ್ ಸೊಸೈಟಿ ನಿರ್ದೇಶಕಿ ಲೀಲಾವತಿ ಗೌರವ ಉಪಸ್ಥಿತರಿದ್ದರು.
ತಂಡದ ಪದಾಧಿಕಾರಿಗಳಾದಂತಹ ಮನೋಹರ ನಾಯ್ಕ, ಪ್ರದೀಪ್ ಶೆಟ್ಟಿ, ದುಗ್ಗಪ್ಪ ನಾಯ್ಕ, ವಿನೋದ್ ಶೆಟ್ಟಿ, ಪ್ರಮೋದ್ ಪೂಜಾರಿ, ಚಂದ್ರಶೇಖರ ಗೌಡ, ನಿಶ್ಮಿತಾ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜಿತೀಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದವನ್ನು ನೀಡಿದರು. ತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಇವರು ಅಭಿನಂದನಾ ಭಾಷಣ ಮಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya
error: Content is protected !!