23.6 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!