23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕುಪೆಟ್ಟಿ, ಕಲ್ಲೇರಿ, ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗುಂಡಿಗಳಿಗೆ ತಾತ್ಕಲಿಕ ಪರಿಹಾರ: ಪ್ರಯಾಣಿಕರಿಗೆ ಧೂಳಿನ ಗೋಳು

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!