July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಜನಾರ್ಶೀವಾದದಿಂದ ಎರಡನೇ ಬಾರಿ ಶಾಸಕರಾಗಿ ಹರೀಶ್ ಪೂಂಜ ಆಯ್ಕೆ: ಕುತ್ಲೂರಿನಲ್ಲಿ ಕಾರ್ಯಕರ್ತರಿಂದ ಅದ್ಧೂರಿ ವಿಜಯೋತ್ಸವ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya
error: Content is protected !!