23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!