September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

ಮೂಡುಬಿದಿರೆ: ಶಿರ್ತಾಡಿ ಬಳಿಯಲ್ಲಿ ಕಾರು ಮತ್ತು ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಆಕ್ಟಿವಾ ಸವಾರೆ, ಶಿಕ್ಷಕಿ ಮೃತಪಟ್ಟ ಘಟನೆ ಮಾ.7ರಂದು ಸಂಜೆ ನಡೆದಿದೆ.


ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿ ಸುಜಯ ಭಂಡಾರಿ (35ವ) ಮೃತಪಟ್ಟವರು.


ಸುಜಯಾ ಅವರು ಮಾ.7ರಂದು ಸಂಜೆ ಶಾಲೆಬಿಟ್ಟು ಮನೆಗೆ ಹೋಗುವಾಗ ಶಿರ್ತಾಡಿ ಸೇತುವೆ ಬಳಿ ಮೂಡುಬಿದಿರೆ ಕಡೆಯಿಂದ ಶಿರ್ತಾಡಿ ಕಡೆ ಬರುತ್ತಿದ್ದ ಹೋಂಡಾ ಸಿಟಿ ಕಾರು ಸುಜಯಾ ಅವರ ಆಕ್ಟಿವಾಕ್ಕೆ ಢಿಕ್ಕಿ ಹೊಡೆದಿದೆ.ಈ‌ ಪರಿಣಾಮ ರಸ್ತೆಗೆಸೆಯಲ್ಪಟ್ಟ ಸುಜಯಾ ಅವರ ತಲೆಗೆ ತೀವ್ರ ತರದ ಗಾಯವಾಗಿತ್ತು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಪ್ರಯೋಜನವಾಗಿಲ್ಲ.


ಸುಜಯಾ ಅವರು ಮೂಡುಬಿದಿರೆ ನಾಗರಕಟ್ಟೆ ನಿವಾಸಿಯಾಗಿದ್ದು ಅವರ ಪತಿ ವಿದೇಶದಲ್ಲಿದ್ದಾರೆ.ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳೆದ ಕೆಲವು ವರ್ಷಗಳಿಂದ ಸುಜಯಾ ಅವರು ಶಿರ್ತಾಡಿ ಹೋಲಿ ಏಂಜಲ್ಸ್ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದರು. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya

ಉರುವಾಲು ಶ್ರೀ ವೀಘ್ನೇಶ್ವರ ಭಜನಾ ಮಂದಿರದಲ್ಲಿ 17 ನೇ‌ ವರ್ಷದ ನಗರ ಭಜನೆಯ ಮಂಗಳೋತ್ಸವ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
error: Content is protected !!