23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ ಮಾ. 08ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷಸ್ಥಾನವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಯವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯನ್ನಲಂಕರಿಸಿದ್ದ ಸಿಯೋನ್ ಆಶ್ರಮದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಸ್ವಾಮಿಯವರು ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಸದಭಿರುಚಿ, ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುವ ಅಗತ್ಯತೆಯ ಕುರಿತು ವಿವರಿಸಿದರು. ಈ ಶುಭ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ದಾದಿಯವರಾದ ಶ್ರೀಮತಿ ಫಿಲೋಮಿನಾ ಹಾಗೂ ಆಶ್ರಮ ನಿವಾಸಿ ದಿವ್ಯರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾಜಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿವಂಗತ ಶ್ರೀಯುತ ವಸಂತ ಬಂಗೇರರವರ ಧರ್ಮಪತ್ನಿ ಶ್ರೀಮತಿ ಸುಜಿತಾ ವಿ ಬಂಗೇರ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಈ ಸಭಾ ಕಾರ್ಯಕ್ರಮದ ಅತಿಥಿಗಳೆಲ್ಲರನ್ನು ಸಂಸ್ಥೆಯ ಸಿಬ್ಬಂದಿಯವರಾದ ಕು. ದೀಕ್ಷಿತಾರವರು ಸ್ವಾಗತಿಸಿ, ಸಂಸ್ಥೆಯ ಸಿಬ್ಬಂದಿ ಸುಜಾತಾರವರು ಕಾರ್ಯಕ್ರಮವನ್ನು ನಿರೂಪಿಸಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಆಶ್ರಮ ನಿವಾಸಿಗಳಿಗೆ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು.

Related posts

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ : ಹೇಮಚಂದ್ರರಿಗೆ ಬೆಸ್ಟ್ ಲಿಪ್ಟರ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!