25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya
error: Content is protected !!