27.4 C
ಪುತ್ತೂರು, ಬೆಳ್ತಂಗಡಿ
April 30, 2025
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya
error: Content is protected !!