22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

ಬೆಳ್ತಂಗಡಿ:ಗುರುವಾಯನಕೆರೆ ಶಕ್ತಿನಗರದ ನವಶಕ್ತಿ
ಕ್ರೀಡಾಂಗಣದಲ್ಲಿ ಮಾ 8 ಶನಿವಾರ ನಡೆದ “ಛತ್ರಪತಿ ಶಿವಾಜಿ” ನಾಟಕವನ್ನು ಸಹಸ್ರಾರು ಮಂದಿ ಕಲಾಭಿಮಾನಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ನೇತೃತ್ವದಲ್ಲಿ ತುಳು ರಂಗ ಭೂಮಿಯಲ್ಲಿ ಶಿವಧೂತೆ ಗುಳಿಗೆ ಖ್ಯಾತಿಯ ವಿಜಯ ಕುಮಾರ್ ಕೊಡಿಯಲ್ ಬೈಲ್ ಸಾರಥ್ಯದ ಕಲಾ ಸಂಗಮ ತಂಡದ ಕಲಾವಿದರಿಂದ “ಛತ್ರಪತಿ ಶಿವಾಜಿ” ಎಂಬ ಐತಿಹಾಸಿಕ ನಾಟಕ ಪ್ರೇಕ್ಷಕರ ಮನಸೂರೆಗೊಂಡಿತು.

ದೇಶ ಭಕ್ತಿ ಹಾಗೂ ಸ್ವರಾಜ್ಯ ಸ್ಥಾಪನೆಗಾಗಿ ದಿಟ್ಟ ಹೋರಾಟ ನಡೆಸುವ ಶಿವಾಜಿ ಮಹಾರಾಜರ ಜೀವನ ಚರಿತ್ರೆಯ ಈ ನಾಟಕವನ್ನು ಸಹಸ್ರಾರು ಮಂದಿ ನಾಟಕ ವೀಕ್ಷಿಸಿ. ಭಗವಾಧ್ವಜ ಹಾರಿಸುತ್ತ ಶಿವಾಜಿಗೆ ಜಯಘೋಷ ಹಾಕಿ ಸಂಭ್ರಮಿಸುತಿದದ್ದು ಎಲ್ಲರ ಗಮನ ಸೆಳೆಯಿತು. ಕೊನೆಯಲ್ಲಿ ವಿಜಯ ಕುಮಾರ್ ಕೊಡಿಯಲ್ ಬೈಲ್ ಸೇರಿದಂತೆ ಕಲಾ ಸಂಗಮ ತಂಡದ ಎಲ್ಲರನ್ನೂ ನವಶಕ್ತಿ ಕುಟುಂಬಸ್ಥರು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ವಿಜಯ ಕುಮಾರ್ ಕೊಡಿಯಲ್ ಬೈಲ್, ನಮ್ಮ ಮಾರ್ಗದರ್ಶಕರಾದ ಉದ್ಯಮಿ ಶಶಿಧ‌ರ್ ಶೆಟ್ಟಿಯವರಂತಹ ಕಲಾ ಪೋಷಕರಿಂದಲೇ ಕಲೆಗೆ ಮತ್ತಷ್ಟು ಗೌರವ,ಕಲಾವಿದರಿಗೆ ಉತ್ತಮ ವೇದಿಕೆ ಸಿಗುತ್ತಿದೆ. ನಮ್ಮ ತಂಡದ ಎಲ್ಲರನ್ನೂ ಕಲಾಭಿಮಾನಿಗಳ ಎದುರು ಗೌರವಿಸಿರುವುದು ತಂಡಕ್ಕೆ ಮತ್ತಷ್ಟು ಶಕ್ತಿ ದೊರಕಿದಂತಾಗಿದೆ.ಅವರ ಕಲಾಪ್ರೀತಿಗೆ, ಅಭಿಮಾನಕ್ಕೆ ನಾವು ಚಿರಋಣಿಗಳು, ಕಲಾಭಿಮಾನಿಗಳ ಪ್ರೋತ್ಸಾಹ ನಮ್ಮ ತಂಡದ ಮೇಲೆ ಸದಾ ಇರಲಿ ಎಂದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ,ವಿಶ್ರಾಂತ ಪ್ರಾಂಶುಪಾಲ ಕುಮಾರ ಹೆಗ್ಡೆ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ “ಲಕ್ಷ್ಮೀ ಗ್ರೂಪ್ಸ್” ಉಜಿರೆ, ರಾಜೇಶ್ ಶೆಟ್ಟಿ ನವಶಕ್ತಿ,ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಶಕ್ತಿನಗರ, ಸುಚಿತಾ ರಾಜೇಶ್ ಶೆಟ್ಟಿ ನವಶಕ್ತಿ, ಉಪಸ್ಥಿತರಿದ್ದರು.ಅರವಿಂದ ಕುಮಾರ್ ಲಾಯಿಲ, ಜಗದೀಶ್ ಕನ್ನಾಜೆ ಸಹಕರಿಸಿದರು.

Related posts

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya
error: Content is protected !!