July 23, 2026
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!