25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya
error: Content is protected !!