24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

ಬೆಳ್ತಂಗಡಿ:ಗುರುವಾಯನಕೆರೆ ಶಕ್ತಿನಗರದ ನವಶಕ್ತಿ
ಕ್ರೀಡಾಂಗಣದಲ್ಲಿ ಮಾ 8 ಶನಿವಾರ ನಡೆದ “ಛತ್ರಪತಿ ಶಿವಾಜಿ” ನಾಟಕವನ್ನು ಸಹಸ್ರಾರು ಮಂದಿ ಕಲಾಭಿಮಾನಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ನೇತೃತ್ವದಲ್ಲಿ ತುಳು ರಂಗ ಭೂಮಿಯಲ್ಲಿ ಶಿವಧೂತೆ ಗುಳಿಗೆ ಖ್ಯಾತಿಯ ವಿಜಯ ಕುಮಾರ್ ಕೊಡಿಯಲ್ ಬೈಲ್ ಸಾರಥ್ಯದ ಕಲಾ ಸಂಗಮ ತಂಡದ ಕಲಾವಿದರಿಂದ “ಛತ್ರಪತಿ ಶಿವಾಜಿ” ಎಂಬ ಐತಿಹಾಸಿಕ ನಾಟಕ ಪ್ರೇಕ್ಷಕರ ಮನಸೂರೆಗೊಂಡಿತು.

ದೇಶ ಭಕ್ತಿ ಹಾಗೂ ಸ್ವರಾಜ್ಯ ಸ್ಥಾಪನೆಗಾಗಿ ದಿಟ್ಟ ಹೋರಾಟ ನಡೆಸುವ ಶಿವಾಜಿ ಮಹಾರಾಜರ ಜೀವನ ಚರಿತ್ರೆಯ ಈ ನಾಟಕವನ್ನು ಸಹಸ್ರಾರು ಮಂದಿ ನಾಟಕ ವೀಕ್ಷಿಸಿ. ಭಗವಾಧ್ವಜ ಹಾರಿಸುತ್ತ ಶಿವಾಜಿಗೆ ಜಯಘೋಷ ಹಾಕಿ ಸಂಭ್ರಮಿಸುತಿದದ್ದು ಎಲ್ಲರ ಗಮನ ಸೆಳೆಯಿತು. ಕೊನೆಯಲ್ಲಿ ವಿಜಯ ಕುಮಾರ್ ಕೊಡಿಯಲ್ ಬೈಲ್ ಸೇರಿದಂತೆ ಕಲಾ ಸಂಗಮ ತಂಡದ ಎಲ್ಲರನ್ನೂ ನವಶಕ್ತಿ ಕುಟುಂಬಸ್ಥರು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ವಿಜಯ ಕುಮಾರ್ ಕೊಡಿಯಲ್ ಬೈಲ್, ನಮ್ಮ ಮಾರ್ಗದರ್ಶಕರಾದ ಉದ್ಯಮಿ ಶಶಿಧ‌ರ್ ಶೆಟ್ಟಿಯವರಂತಹ ಕಲಾ ಪೋಷಕರಿಂದಲೇ ಕಲೆಗೆ ಮತ್ತಷ್ಟು ಗೌರವ,ಕಲಾವಿದರಿಗೆ ಉತ್ತಮ ವೇದಿಕೆ ಸಿಗುತ್ತಿದೆ. ನಮ್ಮ ತಂಡದ ಎಲ್ಲರನ್ನೂ ಕಲಾಭಿಮಾನಿಗಳ ಎದುರು ಗೌರವಿಸಿರುವುದು ತಂಡಕ್ಕೆ ಮತ್ತಷ್ಟು ಶಕ್ತಿ ದೊರಕಿದಂತಾಗಿದೆ.ಅವರ ಕಲಾಪ್ರೀತಿಗೆ, ಅಭಿಮಾನಕ್ಕೆ ನಾವು ಚಿರಋಣಿಗಳು, ಕಲಾಭಿಮಾನಿಗಳ ಪ್ರೋತ್ಸಾಹ ನಮ್ಮ ತಂಡದ ಮೇಲೆ ಸದಾ ಇರಲಿ ಎಂದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ,ವಿಶ್ರಾಂತ ಪ್ರಾಂಶುಪಾಲ ಕುಮಾರ ಹೆಗ್ಡೆ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ “ಲಕ್ಷ್ಮೀ ಗ್ರೂಪ್ಸ್” ಉಜಿರೆ, ರಾಜೇಶ್ ಶೆಟ್ಟಿ ನವಶಕ್ತಿ,ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಶಕ್ತಿನಗರ, ಸುಚಿತಾ ರಾಜೇಶ್ ಶೆಟ್ಟಿ ನವಶಕ್ತಿ, ಉಪಸ್ಥಿತರಿದ್ದರು.ಅರವಿಂದ ಕುಮಾರ್ ಲಾಯಿಲ, ಜಗದೀಶ್ ಕನ್ನಾಜೆ ಸಹಕರಿಸಿದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿ ಹಾಗೂ ಶಾಲೆಯ 207 ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!