22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

ಬೆಳ್ತಂಗಡಿ:ಗುರುವಾಯನಕೆರೆ ಶಕ್ತಿನಗರದ ನವಶಕ್ತಿ
ಕ್ರೀಡಾಂಗಣದಲ್ಲಿ ಮಾ 8 ಶನಿವಾರ ನಡೆದ “ಛತ್ರಪತಿ ಶಿವಾಜಿ” ನಾಟಕವನ್ನು ಸಹಸ್ರಾರು ಮಂದಿ ಕಲಾಭಿಮಾನಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ನೇತೃತ್ವದಲ್ಲಿ ತುಳು ರಂಗ ಭೂಮಿಯಲ್ಲಿ ಶಿವಧೂತೆ ಗುಳಿಗೆ ಖ್ಯಾತಿಯ ವಿಜಯ ಕುಮಾರ್ ಕೊಡಿಯಲ್ ಬೈಲ್ ಸಾರಥ್ಯದ ಕಲಾ ಸಂಗಮ ತಂಡದ ಕಲಾವಿದರಿಂದ “ಛತ್ರಪತಿ ಶಿವಾಜಿ” ಎಂಬ ಐತಿಹಾಸಿಕ ನಾಟಕ ಪ್ರೇಕ್ಷಕರ ಮನಸೂರೆಗೊಂಡಿತು.

ದೇಶ ಭಕ್ತಿ ಹಾಗೂ ಸ್ವರಾಜ್ಯ ಸ್ಥಾಪನೆಗಾಗಿ ದಿಟ್ಟ ಹೋರಾಟ ನಡೆಸುವ ಶಿವಾಜಿ ಮಹಾರಾಜರ ಜೀವನ ಚರಿತ್ರೆಯ ಈ ನಾಟಕವನ್ನು ಸಹಸ್ರಾರು ಮಂದಿ ನಾಟಕ ವೀಕ್ಷಿಸಿ. ಭಗವಾಧ್ವಜ ಹಾರಿಸುತ್ತ ಶಿವಾಜಿಗೆ ಜಯಘೋಷ ಹಾಕಿ ಸಂಭ್ರಮಿಸುತಿದದ್ದು ಎಲ್ಲರ ಗಮನ ಸೆಳೆಯಿತು. ಕೊನೆಯಲ್ಲಿ ವಿಜಯ ಕುಮಾರ್ ಕೊಡಿಯಲ್ ಬೈಲ್ ಸೇರಿದಂತೆ ಕಲಾ ಸಂಗಮ ತಂಡದ ಎಲ್ಲರನ್ನೂ ನವಶಕ್ತಿ ಕುಟುಂಬಸ್ಥರು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಈ ವೇಳೆ ಮಾತನಾಡಿದ ವಿಜಯ ಕುಮಾರ್ ಕೊಡಿಯಲ್ ಬೈಲ್, ನಮ್ಮ ಮಾರ್ಗದರ್ಶಕರಾದ ಉದ್ಯಮಿ ಶಶಿಧ‌ರ್ ಶೆಟ್ಟಿಯವರಂತಹ ಕಲಾ ಪೋಷಕರಿಂದಲೇ ಕಲೆಗೆ ಮತ್ತಷ್ಟು ಗೌರವ,ಕಲಾವಿದರಿಗೆ ಉತ್ತಮ ವೇದಿಕೆ ಸಿಗುತ್ತಿದೆ. ನಮ್ಮ ತಂಡದ ಎಲ್ಲರನ್ನೂ ಕಲಾಭಿಮಾನಿಗಳ ಎದುರು ಗೌರವಿಸಿರುವುದು ತಂಡಕ್ಕೆ ಮತ್ತಷ್ಟು ಶಕ್ತಿ ದೊರಕಿದಂತಾಗಿದೆ.ಅವರ ಕಲಾಪ್ರೀತಿಗೆ, ಅಭಿಮಾನಕ್ಕೆ ನಾವು ಚಿರಋಣಿಗಳು, ಕಲಾಭಿಮಾನಿಗಳ ಪ್ರೋತ್ಸಾಹ ನಮ್ಮ ತಂಡದ ಮೇಲೆ ಸದಾ ಇರಲಿ ಎಂದರು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ,ವಿಶ್ರಾಂತ ಪ್ರಾಂಶುಪಾಲ ಕುಮಾರ ಹೆಗ್ಡೆ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ “ಲಕ್ಷ್ಮೀ ಗ್ರೂಪ್ಸ್” ಉಜಿರೆ, ರಾಜೇಶ್ ಶೆಟ್ಟಿ ನವಶಕ್ತಿ,ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಶಕ್ತಿನಗರ, ಸುಚಿತಾ ರಾಜೇಶ್ ಶೆಟ್ಟಿ ನವಶಕ್ತಿ, ಉಪಸ್ಥಿತರಿದ್ದರು.ಅರವಿಂದ ಕುಮಾರ್ ಲಾಯಿಲ, ಜಗದೀಶ್ ಕನ್ನಾಜೆ ಸಹಕರಿಸಿದರು.

Related posts

ವಿದ್ಯಾರ್ಥಿಗಳಿಗೆ *”ಪ್ರಗತಿ ಹಾಗೂ ಸ್ಪೂರ್ತಿ -2025″ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಸಮಾರೋಪ : ಕೊಂಕಣಿ ಮಾತೃಭಾಷಾ ಶ್ರೀಮಂತಿಕೆಯೇ ನಮ್ಮ ಅಸ್ತಿತ್ವ: ಡಾ. ಕಸ್ತೂರಿ ಮೋಹನ್ ಪೈ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya
error: Content is protected !!