30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ


ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಅರೋಗ್ಯ ಅಧಿಕಾರಿಯಾಗಿರುವ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.


ಇವರು ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕರು ವೆಂಕಟ್ರಮಣ ಗೌಡ ಇವರ ಪತ್ನಿ.

ಇವರು ಸುಮಾರು 32 ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುತ್ತಾರೆ. ಬಂಟ್ವಾಳ ತಾಲೂಕಿನ ಬೋಳಂತೂರು ನಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವೃತ್ತಿ ಜೀವನದಲ್ಲಿ ಮನೆಮನೆಗೆ ಹೋಗಿ 5 ವರ್ಷದಲ್ಲಿ 500 ಗರ್ಭಿಣಿಯರ ಹೆರಿಗೆಯನ್ನು ಮನೆಯಲ್ಲಿಯೇ ಅವರ ಕೈಯ್ಯಾರೆ ಹೆರಿಗೆ ಮಾಡಿಸಿದ್ದಾರೆ. ಹಾಗೂ ಹಲವಾರು ಸಂಘ ಸಂಸ್ಥೆಯಲ್ಲಿ ಸಮಾಜಮುಖಿ ಕೆಲಸವನ್ನು ಮಾಡಿರುತ್ತಾರೆ. ಈ ಕಾರಣದಿಂದ ಇಂತಹ ಒಂದು ಮಹಿಳೆಯನ್ನು ನಮ್ಮ ಮಹಿಳಾಮೋರ್ಚಾದ ಪರವಾಗಿ ಅಭಿನಂದಿಸಿರುವುದು ನಮ್ಮ ಭಾಗ್ಯವೇ ಸರಿ.

ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ಇವರು ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾ ಕ್ಕೇ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಜಯಂತ್, ಉಪಾಧ್ಯಕ್ಷರಾದ ಶಾರದಾ ಚಾರ್ಮಾಡಿ, ಕಾರ್ಯದರ್ಶಿಯಾದ ಶಶಿಕಲಾದೇವಪ್ಪ ಗೌಡ, ಸದಸ್ಯರಾದ ಸವಿತ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya
error: Content is protected !!