25.3 C
ಪುತ್ತೂರು, ಬೆಳ್ತಂಗಡಿ
June 17, 2025
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya
error: Content is protected !!