July 24, 2026
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ತುಳು ಭಾಷೆಯ ಚಿತ್ರಗಳು ಪ್ರಾಬಲ್ಯ ಮೆರೆದವು. ಒಟ್ಟು ಮೂರು ಪ್ರಶಸ್ತಿಗಳ ಪೈಕಿ ಎರಡು ಪ್ರಶಸ್ತಿಗಳನ್ನು ತುಳು ಚಿತ್ರಗಳೇ ಪಡೆದಿರುವುದು ವಿಶೇಷಮನೋಹರ ಕೆ‌. ನಿರ್ದೇಶನದ, ಪೃಥ್ವಿ ಕೊಣನೂರು ನಿರ್ಮಿಸಿದ ಮಿಕ್ಕ ಬಣ್ಣದ ಹಕ್ಕಿ ಸಿನಿಮಾ ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಸಂತೋಷ್ ಮಾಡ ನಿರ್ದೇಶನದ, ಸುರೇಶ್‌ ಕೆ. ನಿರ್ಮಾಣದ ಪಿದಾಯಿ ತುಳು ಚಿತ್ರ ಹಾಗೂ ಅನೀಶ್‌ ಪೂಜಾರಿ ನಿರ್ದೇಶನದ, ರಾಘವೇಂದ್ರ ಕೆ. ನಿರ್ಮಾಣದ ದಸ್ಕತ್ ತುಳು ಸಿನಿಮಾಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದವು.

ವಿಜೇತ ಸಿನಿಮಾಗಳಿಗೆ ಕ್ರಮವಾಗಿ ₹10, ₹5 ಹಾಗೂ ₹2 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕೃಷ್ಣೇಗೌಡ ಅವರು ನಿರ್ದೇಶಿಸಿದ ಲಚ್ಚಿ ನೆಟ್‌ಪ್ಯಾಕ್‌ ಜ್ಯೂರಿ ಪ್ರಶಸ್ತಿಗೆ ಭಾಜನವಾಯಿತು.ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಒಟ್ಟು ಹದಿನಾಲ್ಕು ಸಿನಿಮಾಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಎರಡು ತುಳು ಸಿನಿಮಾಗಳು ಪ್ರಶಸ್ತಿ ಪಡೆದಿರುವುದು ಇದೇ ಮೊದಲು.

Related posts

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!