33.6 C
ಪುತ್ತೂರು, ಬೆಳ್ತಂಗಡಿ
April 30, 2025
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು ಅಭಿನಂದಿಸಲಾಯಿತು.

ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಮಹಿಳಾ ದಿನಾಚರಣೆಯ ಬಗ್ಗೆ ಮಹಿಳೆಯರಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸನ್ಮಾನಿತೆ ತನ್ನ ಜೀವನದಲ್ಲಿ ಪ್ರಥಮವಾಗಿ ಗೌರ್ವಾಪಣೆ ಸ್ವೀಕರಿಸಿದ ಖುಷಿಯಲ್ಲಿ ಮಹಿಳಾ ಮೊರ್ಚಾಕ್ಕೆ ವಿಶೇಷವಾದ ಅಭಿನಂದನೆ ಸಲ್ಲಿಸಿದರು ಮತ್ತು ಅಂಗಾಂಗ ದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್, ಉಪಾಧ್ಯಕ್ಷೆ ಶಾರದಾ ಚಾರ್ಮಾಡಿ, ಕಾರ್ಯದರ್ಶಿ ಶಶಿಕಲಾ ದೇವಪ್ಪ ಗೌಡ, ಸದಸ್ಯರಾದ ಸವಿತಾ ಕುಲಾಲ್, ರೈತ ಮೋರ್ಚಾ ಸದಸ್ಯೆ ಶ್ರೀಮತಿ ಅಶ್ವಿನಿ ಹೆಬ್ಬಾರ್ ಮುಂಡಾಜೆ ಹಾಗೂ ಮಹಿಳಾ ಮೋರ್ಚಾ ಸದಸ್ಯರು ಭಾಗವಹಿಸಿದರು.

Related posts

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya
error: Content is protected !!