March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

ಉಜಿರೆ: ಮನುಷ್ಯನು ಜೀವನದಲ್ಲಿ ಕಷ್ಟವನ್ನು ಅನುಭವಿಸಿದರೆ ಮಾತ್ರ ಮುಂದೆ ಸುಖವನ್ನು ಕಾಣಬಹುದು ಕಷ್ಟವನ್ನು ಅನುಭವಿಸದೆ ಸುಖವನ್ನು ಕಾಣಲು ಸಾಧ್ಯವಿಲ್ಲ ಹಸಿವು ಬಡತನ ಉದ್ಯೋಗ ಅವಮಾನ ಮತ್ತು ಸೋಲು ಈ ಹಂತಗಳನ್ನು ಕಲಿತರೆ ಜೀವನದಲ್ಲಿ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎಂದು ಉಜಿರೆ, ಲಕ್ಷ್ಮಿ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್ ಹೇಳಿದರು.

ಇವರ ಸಾಧನೆಗೆ ಪ್ರೋತ್ಸಾಹ ನೀಡಿದ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆ ,ಮಾತೃಶ್ರೀ ಹೇಮಾವತಿ ಹೆಗ್ಗಡೆ ಮತ್ತು ಡಿ ಹರ್ಷೇಂದ್ರ ಕುಮಾರ್ ಇವರನ್ನು ಸ್ಮರಿಸಿ ಅವರು ಮಾ. 9 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿಯಾದ ಶ್ರೀಮತಿ ಮೇರಿಸ್ಮಿತಾ ರವರು ಹಳೆ ವಿದ್ಯಾರ್ಥಿ ಸಂಘದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಣಯರಾಜ್ ಜೈನ್ ಇವರು ಹಳೆ ವಿದ್ಯಾರ್ಥಿ ಸಂಘದ ಮುಂದಿನ ರೂಪುರೇಷೆಗಳ ಬಗ್ಗೆ ವಿವರಿಸಿದರು ವೇದಿಕೆಯಲ್ಲಿ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಅರವ ರಾಕ್ ಬ್ಯಾಂಡ್ ವತಿಯಿಂದ ಲೈವ್ ಮ್ಯೂಸಿಕ್ ನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉನ್ನತ ಸಾಧನೆಗೈದ ಕಾಲೇಜಿನ ಹಳೆ ವಿದ್ಯಾರ್ಥಿಗಳನ್ನು ಕಾಲೇಜಿನ ಉಪನ್ಯಾಸಕಿ ಶ್ರೀಮತಿ ರೇನಿಟಾ ಫೆರ್ನಾಂಡಿಸ್ ಸಭೆಗೆ ಪರಿಚಯಿಸಿದರು. ನಿಖಿತ್ ಜೈನ್ ಸ್ವಾಗತಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಶ್ಮಿತಾ ವಂದಿಸಿದರು. ಕಾಲೇಜಿನ ಹಿರಿಯ ಹಳೆ ವಿದ್ಯಾರ್ಥಿ ಸಾಯಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya
error: Content is protected !!