41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಮಾನ್ವಿಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷೆ ವಿಮಲ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷೆ ರಮ್ಯಾ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ಮತ್ತು ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಅಧಿಕಾರಿ ವಿಜಯಲಕ್ಷ್ಮಿ, ನಿವೃತ್ತ ಶಿಕ್ಷಕಿ ಮನೋರಮಾ, ವಲಯ ಮೇಲ್ವಿಚಾರಕಿ ವೀಣಾಶ್ರೀ ಹಾಗೂ ಗ್ರಂಥಪಾಲಕಿ ಮಂಜುಳಾ ಉಪಸ್ಥಿತರಿದ್ದರು.

ಒಕ್ಕೂಟದ ಪದಾಧಿಕಾರಿಗಳ ಬದಲಾವಣೆ ಮಾಡಿ ಪದಾಧಿಕಾರಿಗಳಿಗೆ ಮತ್ತು ಉತ್ತಮ ಸಂಘಕ್ಕೆ ಗೌರವಿಸಲಾಯಿತು. ಸಂಜೀವಿನಿ ಸದಸ್ಯರಿಗೆ ಹಾಗೂ ಸ್ತ್ರೀಶಕ್ತಿ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘದ ಸದಸ್ಯರು ತಯಾರಿಸಿದ ಉತ್ಪನ್ನಗಳನ್ನು, ತರಕಾರಿಗಳನ್ನು ಮಾರಾಟ ಮಾಡಲಾಯಿತು. ಒಕ್ಕೂಟದ ಸದಸ್ಯೆ ಅನಿತಾ ವಾರ್ಷಿಕ ವರದಿ ವಾಚಿಸಿದರು. ಪಶು ಸಖಿ ಯಶೋದಾ ಜಮಾಖರ್ಚಿನ ವೆಚ್ಚವನ್ನು ಮಂಡಿಸಿದರು.

ಕೃಷಿ ಸಖಿ ಸುಚೇತಾ ಪ್ರಾರ್ಥಿಸಿ, ಒಕ್ಕೂಟದ ಕಾರ್ಯದರ್ಶಿ ಧನಲಕ್ಷ್ಮೀ ಸ್ವಾಗತಿಸಿ, ಎಲ್‌ಸಿಆರ್‌ಪಿ ಪುಷ್ಪ ವಂದಿಸಿ, ಎಂಬಿಕೆ ಚಂದ್ರವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!