24.7 C
ಪುತ್ತೂರು, ಬೆಳ್ತಂಗಡಿ
June 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಗೋಪಾಲ ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಸುಶೀಲ ಹೆಗ್ಡೆ, ರತ್ನರಾಜ ಹೆಗ್ಡೆ, ರೊನಾಲ್ಡ್ ತಾವ್ರ್ಹೋ, ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ಇವರುಗಳ ಸಹಕಾರದೊಂದಿಗೆ ಸುಮಾರು ರೂ.35ಸಾವಿರಗಳ ಆರ್ಥಿಕ ನೆರವನ್ನು ಚೆಕ್ ಮೂಲಕ ನೌಕರರ ಕುಟುಂಬಕ್ಕೆ ನೀಡಲಾಯಿತು.

ಅನಾರೋಗ್ಯದಲ್ಲಿರುವ ಗೋಪಾಲ ಕೆ ಇಂದಬೆಟ್ಟು ಬಿಲ್ ಕಲೆಕ್ಟರ್ ಇವರಿಗೆ ಪಡಿತರವನ್ನು ವಿತರಿಸಿದರು. ಹಾಗೂ ಪ್ರತಿ ತಿಂಗಳು ಪಡಿತರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರುಕೇಶ್ ಕಲ್ಮಂಜ, ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀಮತಿ ಮೀನಾಕ್ಷಿ ನಡ, ಉಪಸ್ಥಿತರಿದ್ದರು. ನೌಕರರ ಸಂಘದಿಂದ ಕೃತಜ್ಞತೆ ಸಲ್ಲಿಸಲಾಯಿತು.

Related posts

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya
error: Content is protected !!